Sunday, May 20, 2012

ನಾನು ಹಿರೇಮಠ್ರರನು ನೋಡಿದ್ದು ಸುಮಾರು ಮೂವತ್ತು ವರ್ಷಗಳ ಹಿಂದೆ ಪಶ್ಚಿಮ ಘಟ್ಟ ಉಳಿಸಿ ಜಾತಾದಲ್ಲಿ ಅವರ ಹೋರಾಟದ ಬದುಕುನು ಕಣ್ಣಾರೆ ಕಂಡವನು ನಾನು, ಆ ಜಾತಾದಲ್ಲಿ ಬಾಗವಹಿಸಿದ ಹೆಮ್ಮೆ ನನಗೆ ಆಗ ನಾನು ರಾಣಿಬೇನ್ನೂರು R T E S ಕಾಲೇಜಿನಲ್ಲಿ ಓದುತ್ತಿದ್ದೇ ಅವರು ಮೆಡ್ಲೆರೀ ಗ್ರಾಮದಲ್ಲಿ ಬಹಳಷ್ಟು ಸುಧಾರಣಿ ತರುವಲ್ಲಿ ಯಶಸ್ವಿಯಾಗಿದ್ದರು. ಆಮೇಲೆ ಹಿರೇಮಠ್ರರನು ನೋಡಿದ್ದು ಇತ್ತೀಚಿನ ದಿನಗಳಲ್ಲಿ.

ಹಿರೇಮಠ್: ಗಣಿಗಾರಿಕೆ ವಿರುದ್ಧ ಗಟ್ಟಿ ಧ್ವನಿ ಎತ್ತಿರುವ ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ
ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ತೊಡರುಗಲ್ಲಾಗಿ, ಭ್ರಷ್ಟಾಚಾರದ ವಿರುದ್ಧ ನಾಡಿನ ಪ್ರಜ್ಞಾವಂತರ ಸಾಕ್ಷಿಪ್ರಜ್ಞೆಯಾಗಿರುವ ಈ ಹಿರೇಮಠ್ ಅದೇ ಹುಬ್ಬಳ್ಳಿ-ಧಾರವಾಡದಲ್ಲಿರುವ ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷರು, ಅವರು ಸಂಗಯ್ಯ ರಾಚಯ್ಯ ಹಿರೇಮಠ್, ಅದೇ ಕಣ್ರಿ ಎಸ್ ಆರ್ ಹಿರೇಮಠ್. ಜನಾರ್ದನ ರೆಡ್ಡಿ ಸೇರಿದಂತೆ ಇನ್ನಿತರೆ ಅಕ್ರಮ ಗಣಿವೀರರು ಕೊರೆದಿಟ್ಟಿರುವ ಗಣಿ ಪಾತಾಳದಿಂದಲೇ ಅಕ್ರಮ ಗಣಿಗಾರಿಕೆ ವಿರುದ್ಧ ಗಟ್ಟಿ ಧ್ವನಿ ಎತ್ತಿರುವ ಸಾದಾಸೀದಾ ಮನುಷ್ಯ ಈ ಹಿರೇಮಠ್. ಹಿರೇಮಠ್ ಹುಟ್ಟು ಧಾರವಾಡದ ಬೆಳವಂಕಿಯಲ್ಲಿ 1944ರಲ್ಲಿ. ಶಿಕ್ಷಣ- ಮೆಕಾನಿಕಲ್ ಇಂಜಿನಿಯರಿಂಗ್ ಪದವೀಧರ. ಉನ್ನತ ವ್ಯಾಸಂಗ - 1969ರಲ್ಲಿ ಅಮೆರಿಕದಲ್ಲಿ ಎಂಎಸ್ ಜತೆಗೆ, ಎಂಬಿಎ. 10 ವರ್ಷಗಳ ಕಾಲ ಅಮೆರಿಕದಲ್ಲಿಯೇ ಸೇವೆ. ಆ ನಂತರ ತಾಯ್ನಾಡಿನ ಸೇವೆಗೆ ಮರಳಿದ ಹಿರೇಮಠ್, 1984ರಲ್ಲಿ ಧಾರವಾಡದಲ್ಲಿ 'ಸಮಾಜ ಪರಿವರ್ತನಾ ಸಮುದಾಯ'ವನ್ನು ಹುಟ್ಟುಹಾಕಿದರು. ತನ್ಮೂಲಕ ಪರಿಸರ, ಪಂಚಾಯತ್ ರಾಜ್ ಕ್ಷೇತ್ರಗಳಲ್ಲಿ ಹೋರಾಟ. ಅದಕ್ಕಾಗಿ, 1992ರಲ್ಲಿ ಇಂದಿರಾಗಾಂಧಿ ಪರ್ಯಾವರಣ ಪುರಸ್ಕಾರ ಮುಕುಟ. ಇದೀಗ ನಿಮಗೆಲ್ಲ ಗೊತ್ತಿರುವಂತೆ 'ಮೈನಿಂಗ್ ಮಾಫಿಯಾ' ವಿರುದ್ಧ ಅವರದು ಸುಪ್ರೀಂ ಹೋರಾಟ.

No comments:

Post a Comment